ಅನಂತಪುರ, 18-12-2024
ಉಡುಪಿ ಅಷ್ಟಮಠಗಳಲ್ಲೊಂದಾದ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರ 2026ರ ಪ್ರಥಮ ಪರ್ಯಾಯ ಪೂರ್ವಭಾವಿ ಸಂಚಾರದ ಪ್ರಯುಕ್ತ ಕೇರಳದ ಏಕೈಕ ಸರೋವರ ಕ್ಷೇತ್ರವೆಂದೇ ಖ್ಯಾತವಾದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಕ್ಕೆ ಇಂದು ಭೇಟಿ ನೀಡಿದರು.
ಶ್ರೀದೇವಿ, ಭೂದೇವಿ ಸಹಿತ ಶ್ರೀ ಅನಂತಪದ್ಮನಾಭ ಸ್ವಾಮಿಯ ದರ್ಶನ ಪಡೆದ ಶ್ರೀಗಳು ಮುಂಬರುವ ಜೀರ್ಣೋದ್ಧಾರ ಯೋಜನೆಗಳ ಕುರಿತು ಮಾಹಿತಿ ಪಡೆದರು. ತಮ್ಮ ಮುಂಬರುವ ಪರ್ಯಾಯ ಪೀಠಾರೋಹಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಸಮಸ್ತರನ್ನೂ ಆಮಂತ್ರಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಮಹಾಲಿಂಗೇಶ್ವರ ಭಟ್ ಪೆರ್ಣೆ ಮತ್ತು ಕಾರ್ಯದರ್ಶಿಗಳಾದ ರಾಮಚಂದ್ರ ಭಟ್ ಅವರು ಶ್ರೀಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಾಲಯದ ಪ್ರಧಾನ ಅರ್ಚಕರು, ಸಿಬ್ಬಂದಿಗಳು, ಜೀರ್ಣೋದ್ಧಾರ ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದರು.